Şarkı sözleri
ಹಿಂದೆ ಹೇಗೆ ಚಿಮ್ಮುತಿತ್ತು
ಕಣ್ಣ ತುಂಬ ಪ್ರೀತಿ!
ಈಗ ಯಾಕೆ ಜ್ವಲಿಸುತ್ತಿದೆ
ಏನೋ ಶಂಕೆ ಭೀತಿ!
ಜೇನು ಸುರಿಯುತಿತ್ತು ನಿನ್ನ
ದನಿಯ ಧಾರೆಯಲ್ಲಿ,
ಕುದಿಯುತಿದೆ ಈಗ ವಿಷ
ಮಾತು ಮಾತಿನಲ್ಲಿ.
ಒಂದು ಸಣ್ಣ ಮಾತಿನಿರಿತ
ತಾಳದಾಯ್ತೆ ಪ್ರೇಮ?
ಜೀವವೆರಡು ಕೂಡಿ ಉಂಡ
ಸ್ನೇಹವಾಯ್ತೆ ಹೋಮ?
ಹಮ್ಮು ಬೆಳೆದು ನಮ್ಮ ಬಾಳು
ಆಯ್ತು ಎರಡು ಹೋಳು,
ಕೂಡಿಕೊಳಲಿ ಮತ್ತೆ ಪ್ರೀತಿ
ತಬ್ಬಿಕೊಳಲಿ ತೋಳು
Written by: C Ashwath, N.S. Lakshminarayana Bhatt


